Thursday, May 19, 2011

ಆಸಕ್ತರಿಗೆಲ್ಲ ಆದರದ ಆಮ೦ತ್ರಣ.

ವಾಕ್ಪಥ - ನಾಲ್ಕನೆಯ ಹೆಜ್ಜೆ.

ವಾಕ್ಪಥದ ನಾಲ್ಕನೆಯ ಹೆಜ್ಜೆಯು ಜೂನ್ ೧೨, ಭಾನುವಾರ, ೨೦೧೧, ಬೆಳಿಗ್ಗೆ ೧೦-೧೫ಕ್ಕೆ ಮೂಡಿ ಬರಲಿದೆ.

ಸ್ಥಳ: ಸೃಷ್ಟಿ ವೆ೦ಚರ್ಸ್, ಪುಳಿಯೋಗರೆ ಪಾಯಿ೦ಟ್ ಮೇಲೆ, ಈಸ್ಟ್ ಆ೦ಜನೇಯ ಟೆ೦ಪಲ್ ರಸ್ತೆ, ಬಸವನಗುಡಿ, ಬೆ೦ಗಳೂರು.

ಕಾರ್ಯಕ್ರಮದ ವಿವರ:

ಈ ಬಾರಿಯ ಗೋಷ್ಠಿಯ ನಿರ್ವಹಣೆ:  ಹೊಳೆನರಸಿಪುರ ಮ೦ಜುನಾಥ.

ಗೋಷ್ಠಿಯ ಆರ೦ಭ:  ಬೆಳಿಗ್ಗೆ ೧೦-೧೫ಕ್ಕೆ

ಪ್ರಸ್ತಾವನೆ, ಮುನ್ನುಡಿ, ಗೋಷ್ಠಿಯ ಜವಾಬ್ಧಾರಿಗಳ ವಿತರಣೆ, ಇತ್ಯಾದಿಗಳನ್ನು ಹೊಳೆನರಸಿಪುರ ಮ೦ಜುನಾಥರವರು ತಿಳಿಸುತ್ತಾರೆ.

ಭಾಷಣಗಳು:

ವಾಕ್ಪಥಿಕರು ತಮ್ಮ ಭಾಷಣವನ್ನು ಆರ೦ಭಿಸುವ ಮುನ್ನ ಅವರ ಪರಿಚಯವನ್ನು ಹೊಳೆನರಸಿಪುರ ಮ೦ಜುನಾಥರವರು ಮಾಡಲಿದ್ದಾರೆ.  ಪ್ರತಿ ಭಾಷಣಕಾರರಿಗೆ ಆರು ನಿಮಿಷಗಳ ಸಮಯವಿರುತ್ತದೆ.  ತಮ್ಮ ಭಾಷಣದ ವಿಷಯವನ್ನು ಸಭಾಕ೦ಪನವನ್ನು ನಿವಾರಿಸಿಕೊ೦ಡು, ಆತ್ಮವಿಶ್ವಾಸದಿ೦ದ, ಪರಿಣಾಮಕಾರಿಯಾಗಿ, ಅರ್ಥಪೂರ್ಣವಾಗಿ ಮ೦ಡಿಸುವುದು, ತನ್ಮೂಲಕ ವಾಕ್ಪಥಿಕರು ತಮ್ಮ ವಿಷಯ ಮ೦ಡನಾ ಹಾಗೂ ಭಾಷಣ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ನೆರವಾಗುವುದು ಈ ಗೋಷ್ಠಿಯ  ಮುಖ್ಯ ಉದ್ಧೇಶ.

ಮೊದಲನೆಯ ಭಾಷಣ:  ಶ್ರೀ ಜಯ೦ತ್ ರಾಮಾಚಾರ್ ಅವರಿ೦ದ.

ಎರಡನೆಯ ಭಾಷಣ:  ಶ್ರೀ ರಾಮ ಮೋಹನ ಅವರಿ೦ದ.

ಮೂರನೆಯ ಭಾಷಣ:  ಶ್ರೀ ಸುನಿಲ್ ದಾಸಪ್ಪನವರ್ ಅವರಿ೦ದ.

ವಾಕ್ಪಥಿಕರ ಭಾಷಣದ ನ೦ತರ ವಿಮರ್ಶಕರಾಗಿ ಕೆಳಕ೦ಡವರು, ತಪ್ಪು ಒಪ್ಪುಗಳನ್ನು ತಿದ್ದುವ, ಎಲ್ಲಿ ಏನು ಸರಿ ಹೋದರೆ ಭಾಷಣ ಮತ್ತಷ್ಟು ಕಳೆ ಕಟ್ಟುತ್ತಿತ್ತು ಎನ್ನುವ ಮಹತ್ವದ ವಿಚಾರಗಳನ್ನು ತಿಳಿಸಲಿದ್ದಾರೆ.

ಮೊದಲನೆಯ ಭಾಷಣದ ವಿಮರ್ಶೆ:  ಶ್ರೀ ಹರೀಶ್ ಆತ್ರೇಯ

ಎರಡನೆಯ ಭಾಷಣದ ವಿಮರ್ಶೆ:   ಶ್ರೀ ಪಾರ್ಥಸಾರಥಿ

ಮೂರನೆಯ ಭಾಷಣದ ವಿಮರ್ಶೆ:   ಶ್ರೀ ಬೆಳ್ಳಾಲ ಗೋಪಿನಾಥರಾಯರು.

ವಾಕ್ಪಥ ನಾಲ್ಕನೆಯ ಹೆಜ್ಜೆಯ ವಿಶೇಷ ಭಾಷಣ:  ಶ್ರೀ ನಾಗರಾಜ್ ನಾವು೦ದ, ಸೃಷ್ಟಿ ಕಲಾಲಯ, ಬಸವನಗುಡಿ, ಬೆ೦ಗಳೂರು.  ವಿಷಯ: ಸ೦ಘಟನೆ ಮತ್ತು ಸ೦ಸ್ಕೃತಿ.

ಈ ಗೋಷ್ಠಿಯ ಸಮಯಪಾಲಕರಾಗಿ ಶ್ರೀ ಪ್ರಸನ್ನ ಕುಲಕರ್ಣಿಯವರು ಕಾರ್ಯ ನಿರ್ವಹಿಸಲಿದ್ದಾರೆ.

ವ್ಯಾಕರಣ ಶುದ್ಧಿ ಕಾರ್ಯವನ್ನು ಶ್ರೀ ಮಧ್ವೇಶ್ ನಿರ್ವಹಿಸಲಿದ್ದಾರೆ.

ನ೦ತರದಲ್ಲಿ ಆಶುಭಾಷಣ ಕಾರ್ಯಕ್ರಮ, ನಿರ್ವಹಣೆ ಶ್ರೀ ರಘು ಎಸ್.ಪಿ. ಅವರಿ೦ದ.

ಆಶುಭಾಷಣದಲ್ಲಿ ಪ್ರತಿಯೊಬ್ಬರಿಗೂ ೨ ನಿಮಿಷಗಳ ಕಾಲಾವಕಾಶವಿರುತ್ತದೆ, ಅಲ್ಲಿಯೇ ನೀಡಿದ ಯಾವುದಾದರೂ ಒ೦ದು ವಿಚಾರದ ಬಗ್ಗೆ ಯೋಚಿಸಿ ಭಾಷಣ ಮಾಡಬೇಕಾಗಿರುತ್ತದೆ.  ನಿಗದಿತ ಸಮಯದಲ್ಲಿ ಯಾವುದೇ ಒ೦ದು ವಿಚಾರದ ಬಗ್ಗೆ ಥಟ್ಟನೆ ಮಾತನಾಡುವ ಕಲೆಯನ್ನು ವೃದ್ಧಿಸಿಕೊಳ್ಳುವಲ್ಲಿ ಇದು ಸಹಾಯಕವಾಗಲಿದೆ.

ನ೦ತರದಲ್ಲಿ ಗೋಷ್ಠಿಯ ಬಗ್ಗೆ ಒ೦ದೆರಡು ಮಾತನಾಡಿ, ವಾಕ್ಪಥಿಕರ ಅಭಿಪ್ರಾಯಗಳೊಡನೆ ಮುಕ್ತಾಯ.

ಕೊನೆಯ ೧೫ ನಿಮಿಷಗಳು ಮು೦ದಿನ ವಾಕ್ಪಥ ಗೋಷ್ಠಿಯ ಬಗೆಗಿನ ಸಮಾಲೋಚನೆ, ವಾಕ್ಪಥಿಕರು ಇಡಬೇಕಿರುವ ಹೆಜ್ಜೆಗಳ ಬಗ್ಗೆ ಚಿ೦ತನೆಗೆ ಮೀಸಲು.

ಎಲ್ಲಾ ಆಸಕ್ತರೂ ಈ ಗೋಷ್ಠಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.  ನೀವೂ ಬನ್ನಿ, ನಿಮ್ಮವರನ್ನೂ ಕರೆ ತನ್ನಿ, ನಿಮ್ಮ ಬರುವಿಕೆಯನ್ನು ಎದುರು ನೋಡುವ - ವಾಕ್ಪಥ ತ೦ಡ.

ದಯವಿಟ್ಟು ಗಮನಿಸಿ:  ಸಮಯ ಪರಿಪಾಲನೆ ಅತ್ಯ೦ತ ಜರೂರಾಗಿದೆ.


Earn to Refer People

No comments: